ವೇದಜೀವನ ಬ್ಲಾಗಿಗೆ ಸ್ವಾಗತ. ಸುವಿಚಾರಗಳು ಎಲ್ಲಿಂದಲಾದರೂ ಬರಲಿ, ಯಾರಿಂದಲಾದರೂ ಬರಲಿ, ಪೂರ್ವಾಗ್ರಹ ಪೀಡಿತರಾಗದೆ ಸ್ವೀಕರಿಸೋಣ.

ಮಂಗಳವಾರ, ಮೇ 24, 2011

ವೇದೋಕ್ತ ಜೀವನ ಪಥ: ಮಾನವಧರ್ಮ - ೫

ಕೇಳಿರಿ:-
ಪರಾ ಯಾಹಿ ಮಘವನ್ನಾ ಚ ಯಾಹೀಂದ್ರ ಭ್ರಾತರುಭಯತ್ರಾ ತೇ ಅರ್ಥಮ್ |
ಯತ್ರಾ ರಥಸ್ಯ ಬೃಹತೋ ನಿಧಾನಂ ವಿಮೋಚನಂ ವಾಜಿನೋ ರಾಸಭಸ್ಯ ||
(ಋಕ್. ೩.೫೩.೫.)
     [ಮಘವನ್] ಓ ಸೌಭಾಗ್ಯಶಾಲಿ, [ಭ್ರಾತಃ] ಸೋದರ, [ಇಂದ್ರ] ಇಂದ್ರಿಯವಾನ್ ಜೀವಾತ್ಮನ್, [ಯತ್ರ] ಎಲ್ಲಿ [ಬೃಹತಃ ರಥಸ್ಯ] ಮಹಾನ್ ಶರೀರದ [ನಿಧಾನಮ್] ಆಶ್ರಯವಿದೆಯೋ [ರಾಸಭಸ್ಯ] ಮೋಕ್ಷಕ್ಕಾಗಿ ಹಾತೊರೆದು ಕೂಗುವ [ವಾಜಿನಃ] ಜ್ಞಾನವಾನ್ ಆತ್ಮನ [ವಿಮೋಚನಮ್] ಮುಕ್ತಿಯಿದೆಯೋ [ಉಭಯತ್ರಾ] ಆ ಎರಡೂ ಕಡೆಗೂ [ತೇ ಅರ್ಥಮ್] ನಿನ್ನ ಹಿತದ ಸಲುವಾಗಿ [ಆ ಯಾಹಿ] ಬಾ [ಚ] ಮತ್ತು [ಪರಾಯಾಹಿ] ಹೋಗು.
     ಭಾವನೆ ಸ್ಪಷ್ಟವಾಗಿದೆ. ಧರ್ಮವು ಕೇವಲ ಐಹಿಕಸುಖದ ಸಾಧನವೂ ಅಲ್ಲ, ಕೇವಲ ಆಮುಷ್ಮಿಕ ಸುಖದ ಸಾಧನವೂ ಅಲ್ಲ, ಇಹ-ಪರಗಳೆರಡಕ್ಕೂ ಗಮನವಿತ್ತು, ಎರಡನ್ನೂ ಸಾಧಿಸಿಕೊಡಬಲ್ಲ ಮಾರ್ಗವೇ ಧರ್ಮ. ಆ ಜೀವನಮಾರ್ಗ ರೂಪಗೊಳ್ಳುವುದು ಆತ್ಮೋದ್ಧಾರಕಾರಿಗಳಾದ ಸದ್ಗುಣಗಳ ಸಮೂಹದಿಂದ.
*********************************

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ